"ಕನ್ನಡದ ಕಬೀರ" ಎಂದೇ ಪ್ರಸಿದ್ದರಾಗಿರುವ ಸೂಫಿ ಪರಂಪರೆಯ ಪುನರುಜ್ಜೀವನ ಹಾಗೂ ಸರ್ವಧರ್ಮ ಭಾವೈಕ್ಯತೆಗೆ ಶ್ರಮಿಸುತ್ತಿರುವ ಬಾಗಲಕೋಟೆಯ ಮಹಾಲಿಂಗಪುರದ ಇಬ್ರಾಹಿಂ ಸುತಾರಾ ರವರನ್ನು ಸಂಪಾದಕ ಕೆ.ಎನ್. ಅಕ್ರಂಪಾಷರವರು ಭೇಟಿಯಾಗಿ ಕವಿವಾಣಿ ಪತ್ರಿಕೆಯನ್ನು ನೀಡಿದರು. ಪತ್ರಿಕೆಯನ್ನು ಓದಿದ ಸುತಾರಾ ರವರು ಕವಿವಾಣಿ ಪತ್ರಿಕೆಯ ಕನ್ನಡ ಸಾಹಿತ್ಯ ಸೇವೆಯನ್ನು ಮುಕ್ತಕಂಠದಿಂದ ಕೊಂಡಾಡಿದರು. ಜೊತೆಗೆ ಸಂಪಾದಕರನ್ನು ಹಾಗೂ ಪತ್ರಿಕೆಯ ಬಳಗವನ್ನು ಅಭಿನಂದಿಸಿದರು.
ಕನ್ನಡ ಕವಿವಾಣಿಯು ಒಂದು ಸಾಹಿತ್ಯಿಕ ಮಾಸಪತ್ರಿಕೆಯಾಗಿದ್ದು, ಕಳೆದ ಹಲವಾರು ವರ್ಷಗಳಿಂದ ಕನ್ನಡದ ಕಂಪನ್ನು ಹರಡುವಲ್ಲಿ ತನ್ನ ಅವಿಸ್ಮರಣೀಯ ಕೊಡುಗೆಯನ್ನು ನೀಡುತ್ತಾ ಬರುತ್ತಿದೆ. ಪ್ರತಿತಿಂಗಳು ನೂರಾರು ಕನ್ನಡ ಮಿತ್ರರಿಗೆ ಉಚಿತವಾಗಿ ಸೇರಿ, ತನ್ನಲ್ಲಿ ಹುದುಗಿರುವ ಕನ್ನಡ ಸವಿಯನ್ನು ಎಲ್ಲರಿಗೂ ಉಣಬಡಿಸುತ್ತಿದೆ. ಇದು ಚಿಂತಾಮಣಿಯ ಯುವಸಾಹಿತಿ ಹಾಗೂ ಶಿಕ್ಷಕರಾಗಿರುವ ಕೆ.ಎನ್. ಅಕ್ರಂಪಾಷಾರವರ ಸಂಪಾದಕೀಯ ನೇತೃತ್ವದಲ್ಲಿ ಮೂಡಿಬರುತ್ತಿದೆ. ಯುವಕವಿ ಹಾಗೂ ಸಾಹಿತಿಗಳಿಗೆ ತಮ್ಮ ಕನ್ನಡ ಸಾಹಿತ್ಯವನ್ನು ಅಭಿವ್ಯಕ್ತಗೊಳಿಸಲು ಉತ್ತಮ ವೇದಿಕೆಯಾಗಿ ಕೂಡ ನಿರ್ವಹಿಸುತ್ತಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ