ಗುರುವಾರ, ನವೆಂಬರ್ 23, 2017

ಅಕ್ರಂಪಾಷರನ್ನು ಅಭಿನಂದಿಸಿದ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ



ಚಿಂತಾಮಣಿ: ಅಜ್ಜಂಪುರ ಜಿ.ಸೂರಿ ಪ್ರತಿಷ್ಠಾನ, ರತ್ನ ಪ್ರಕಾಶನ ಕಡೂರು ಹಾಗೂ ಸೂರಿ ಸೃಷ್ಠಿಯ ಬರಹಲೋಕ ವಾಟ್ಸಪ್ ಬಳಗದ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕವಿಗೋಷ್ಠಿಗೆ ಚಿಂತಾಮಣಿಯಿಂದ ಆಯ್ಕೆಯಾಗಿದ್ದ ರಾಜ್ಯಪ್ರಶಸ್ತಿ ಪುರಸ್ಕೃತ ಯುವಬರಹಗಾರ ಹಾಗೂ ಜೈನ್ ಪಬ್ಲಿಕ್ ಶಾಲೆಯ ಶಿಕ್ಷಕ ಕೆ.ಎನ್.ಅಕ್ರಂಪಾಷರವರು ಕವಿಗೋಷ್ಠಿಯಲ್ಲಿ ಮಾತನಾಡಿದ ಗೌರಿ ಎಂಬ ಸ್ವರಚಿತ ಕವನ ವಾಚಿಸಿ ಎಲ್ಲರ ಗಮನಸೆಳೆದರು.

  
ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ್ದ ಬೆಂಗಳೂರಿನ ಕರ್ನಾಟಕ ರಾಜ್ಯ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರ ಭೂಪತಿ ರವರು ಅಕ್ರಂಪಾಷರವರಿಗೆ ನೆನಪಿನ ಕಾಣಿಕೆ ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಿದರಲ್ಲದೆ, ತಮ್ಮ ಸಾಹಿತ್ಯ ಕೃಷಿಯನ್ನು ಹೀಗೆ ಮುಂದುವರಿಸಿ ಎಂದು ಶುಭಹಾರೈಸಿದರು.ಈ ಸಂದರ್ಭದಲ್ಲಿ ಚಿಕ್ಕಮಗಳೂರಿನ ಸಾಹಿತಿ ಡಾ.ಮಂಜುಳಾ ಹುಲ್ಲಳ್ಳಿ, ಶೃಂಗೇರಿಯ ಸಾಹಿತಿ ಡಾ.ಆಗುಂಬೆ ಗಣೇಶ್ ಹೆಗಡೆ, ಕವಿ ಅರಗರವಿ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್.ಶರತ್ ಕೃಷ್ಣಮೂರ್ತಿ, ಸೂರಿ ಶ್ರೀನಿವಾಸ್ ರವರುಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ