ದಿನಾಂಕ 30-12-2018 ರಂದು ರಾಷ್ಟ್ರಕವಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ಚಿಂತಾಮಣಿ ನಗರದ ಶ್ರೀಸಾಯಿ ಭಾಗ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ " ರಾಜ್ಯಮಟ್ಟದ ಕವಿಗೋಷ್ಟಿ" ಕಾರ್ಯಕ್ರಮದಲ್ಲಿ "ಕನ್ನಡ ಕವಿವಾಣಿ" ಪತ್ರಿಕೆಯ ಪ್ರಧಾನ ಸಂಪಾದಕರಾದ ಶ್ರೀ ಅಕ್ರಂಪಾಷಾ ಕೆ. ಎನ್. ರವರಿಗೆ "ಸಾಹಿತ್ಯ ಚಿಂತಾಮಣಿ" ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಬಳಗ ( ಚಿಂತಾಮಣಿ ಘಟಕ) ರವರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಅಕ್ರಂರವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿದರು. ಇದೇ ಕವಿಗೋಷ್ಟಿಯಲ್ಲಿ ಅಕ್ರಂರವರು ತಮ್ಮ ಕವನಗಳನ್ನು ವಾಚಿಸಿ ಎಲ್ಲರ ಗೌರವಕ್ಕೆ ಪಾತ್ರರಾದರು.
ಕನ್ನಡ ಕವಿವಾಣಿಯು ಒಂದು ಸಾಹಿತ್ಯಿಕ ಮಾಸಪತ್ರಿಕೆಯಾಗಿದ್ದು, ಕಳೆದ ಹಲವಾರು ವರ್ಷಗಳಿಂದ ಕನ್ನಡದ ಕಂಪನ್ನು ಹರಡುವಲ್ಲಿ ತನ್ನ ಅವಿಸ್ಮರಣೀಯ ಕೊಡುಗೆಯನ್ನು ನೀಡುತ್ತಾ ಬರುತ್ತಿದೆ. ಪ್ರತಿತಿಂಗಳು ನೂರಾರು ಕನ್ನಡ ಮಿತ್ರರಿಗೆ ಉಚಿತವಾಗಿ ಸೇರಿ, ತನ್ನಲ್ಲಿ ಹುದುಗಿರುವ ಕನ್ನಡ ಸವಿಯನ್ನು ಎಲ್ಲರಿಗೂ ಉಣಬಡಿಸುತ್ತಿದೆ. ಇದು ಚಿಂತಾಮಣಿಯ ಯುವಸಾಹಿತಿ ಹಾಗೂ ಶಿಕ್ಷಕರಾಗಿರುವ ಕೆ.ಎನ್. ಅಕ್ರಂಪಾಷಾರವರ ಸಂಪಾದಕೀಯ ನೇತೃತ್ವದಲ್ಲಿ ಮೂಡಿಬರುತ್ತಿದೆ. ಯುವಕವಿ ಹಾಗೂ ಸಾಹಿತಿಗಳಿಗೆ ತಮ್ಮ ಕನ್ನಡ ಸಾಹಿತ್ಯವನ್ನು ಅಭಿವ್ಯಕ್ತಗೊಳಿಸಲು ಉತ್ತಮ ವೇದಿಕೆಯಾಗಿ ಕೂಡ ನಿರ್ವಹಿಸುತ್ತಿದೆ.
ಬುಧವಾರ, ಜನವರಿ 9, 2019
ಅಕ್ರಂಪಾಷಾಗೆ ಸಾಹಿತ್ಯ ಚಿಂತಾಮಣಿ ಪ್ರಶಸ್ತಿ
ದಿನಾಂಕ 30-12-2018 ರಂದು ರಾಷ್ಟ್ರಕವಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ಚಿಂತಾಮಣಿ ನಗರದ ಶ್ರೀಸಾಯಿ ಭಾಗ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ " ರಾಜ್ಯಮಟ್ಟದ ಕವಿಗೋಷ್ಟಿ" ಕಾರ್ಯಕ್ರಮದಲ್ಲಿ "ಕನ್ನಡ ಕವಿವಾಣಿ" ಪತ್ರಿಕೆಯ ಪ್ರಧಾನ ಸಂಪಾದಕರಾದ ಶ್ರೀ ಅಕ್ರಂಪಾಷಾ ಕೆ. ಎನ್. ರವರಿಗೆ "ಸಾಹಿತ್ಯ ಚಿಂತಾಮಣಿ" ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಬಳಗ ( ಚಿಂತಾಮಣಿ ಘಟಕ) ರವರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಅಕ್ರಂರವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿದರು. ಇದೇ ಕವಿಗೋಷ್ಟಿಯಲ್ಲಿ ಅಕ್ರಂರವರು ತಮ್ಮ ಕವನಗಳನ್ನು ವಾಚಿಸಿ ಎಲ್ಲರ ಗೌರವಕ್ಕೆ ಪಾತ್ರರಾದರು.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ