ಕನ್ನಡ ಕವಿವಾಣಿಯು ಒಂದು ಸಾಹಿತ್ಯಿಕ ಮಾಸಪತ್ರಿಕೆಯಾಗಿದ್ದು, ಕಳೆದ ಹಲವಾರು ವರ್ಷಗಳಿಂದ ಕನ್ನಡದ ಕಂಪನ್ನು ಹರಡುವಲ್ಲಿ ತನ್ನ ಅವಿಸ್ಮರಣೀಯ ಕೊಡುಗೆಯನ್ನು ನೀಡುತ್ತಾ ಬರುತ್ತಿದೆ. ಪ್ರತಿತಿಂಗಳು ನೂರಾರು ಕನ್ನಡ ಮಿತ್ರರಿಗೆ ಉಚಿತವಾಗಿ ಸೇರಿ, ತನ್ನಲ್ಲಿ ಹುದುಗಿರುವ ಕನ್ನಡ ಸವಿಯನ್ನು ಎಲ್ಲರಿಗೂ ಉಣಬಡಿಸುತ್ತಿದೆ. ಇದು ಚಿಂತಾಮಣಿಯ ಯುವಸಾಹಿತಿ ಹಾಗೂ ಶಿಕ್ಷಕರಾಗಿರುವ ಕೆ.ಎನ್. ಅಕ್ರಂಪಾಷಾರವರ ಸಂಪಾದಕೀಯ ನೇತೃತ್ವದಲ್ಲಿ ಮೂಡಿಬರುತ್ತಿದೆ. ಯುವಕವಿ ಹಾಗೂ ಸಾಹಿತಿಗಳಿಗೆ ತಮ್ಮ ಕನ್ನಡ ಸಾಹಿತ್ಯವನ್ನು ಅಭಿವ್ಯಕ್ತಗೊಳಿಸಲು ಉತ್ತಮ ವೇದಿಕೆಯಾಗಿ ಕೂಡ ನಿರ್ವಹಿಸುತ್ತಿದೆ.
ಭಾನುವಾರ, ಮೇ 3, 2020
ಭಾವಪೂರ್ಣ ಶ್ರದ್ಧಾಂಜಲಿ - ಡಾ. ಕೆ ಎಸ್ ನಿಸಾರ್ ಅಹಮದ್
ಕನ್ನಡ ಸಾಹಿತ್ಯ ಲೋಕದ ದಿಗ್ಗಜರು, ನಿತ್ಯೋತ್ಸವ ಕವಿ ಎಂದೆ ಖ್ಯಾತರಾದವರು, ತಮ್ಮ ಬರಹದ ಮೂಲಕ ನಾಡಿನ ಜನರ ಮನೆ-ಮನಗಳನ್ನು ತಲುಪಿದವರು, ಸರಳ ಸಜ್ಜನಿಕೆಗೆ ಹೆಸರಾದವರು ,ಸಾಹಿತ್ಯಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸಿದ ಗೌರವಾನ್ವಿತ ನಿತ್ಯೋತ್ಸವ ಕವಿ ನಾಡೋಜ ಪದ್ಮಶ್ರೀ ಡಾ. ಕೆ ಎಸ್ ನಿಸಾರ್ ಅಹಮದ್ ರವರ ಅಗಲಿಕೆ ಯು ಕನ್ನಡ ಸಾಹಿತ್ಯಲೋಕಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ . ಇವರ ಅಗಲಿಕೆಯಿಂದಾಗಿ ಸಾಹಿತ್ಯ ಲೋಕ ಬಡವಾಗಿದೆ . ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಆ ಭಗವಂತ ಇವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತಾ ಕವಿ ನಿಸಾರ್ ಅಹಮದ್ ರವರಿಗೆ ಕನ್ನಡ ಕವಿವಾಣಿ ಮಾಸಪತ್ರಿಕೆಯ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ.
🌸🌸🌸🌸🌸🌸🌸
ಕೆ ಎನ್ ಅಕ್ರಂಪಾಷ
ಪ್ರಧಾನ ಸಂಪಾದಕರು
ಕನ್ನಡ ಕವಿವಾಣಿ ಮಾಸಪತ್ರಿಕೆ
ಚಿಂತಾಮಣಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ