ಸ್ಪರ್ಧೆಯಲ್ಲಿ ಪ್ರಥಮ ದ್ವಿತೀಯ ತೃತೀಯ ಸ್ಥಾನ ಪಡೆದ ಕವಿಗಳಿಗೆ ರಾಜ್ಯಮಟ್ಟದ ಕಾವ್ಯ ಸಿರಿ ಪ್ರಶಸ್ತಿ ಯನ್ನು ನೀಡಿ ಅಭಿನಂದಿಸಲಾಗಿದೆ. ಹಾಗೆಯೇ ಮೆಚ್ಚುಗೆ ಪಡೆದ ಕವಿಗಳಿಗೂ ಪ್ರಶಸ್ತಿ ಪತ್ರವನ್ನು ನೀಡಿ ಪುರಸ್ಕರಿಸಲಾಗಿದೆ. ಭಾಗವಹಿಸಿರುವ ಎಲ್ಲಾ ಕವಿಗಳಿಗೂ ಅಭಿನಂದನಾ ಪತ್ರಗಳನ್ನು ನೀಡಿ ಅಭಿನಂದಿಸಲಾಗಿದೆ.
ಕನ್ನಡ ಕವಿವಾಣಿಯು ಒಂದು ಸಾಹಿತ್ಯಿಕ ಮಾಸಪತ್ರಿಕೆಯಾಗಿದ್ದು, ಕಳೆದ ಹಲವಾರು ವರ್ಷಗಳಿಂದ ಕನ್ನಡದ ಕಂಪನ್ನು ಹರಡುವಲ್ಲಿ ತನ್ನ ಅವಿಸ್ಮರಣೀಯ ಕೊಡುಗೆಯನ್ನು ನೀಡುತ್ತಾ ಬರುತ್ತಿದೆ. ಪ್ರತಿತಿಂಗಳು ನೂರಾರು ಕನ್ನಡ ಮಿತ್ರರಿಗೆ ಉಚಿತವಾಗಿ ಸೇರಿ, ತನ್ನಲ್ಲಿ ಹುದುಗಿರುವ ಕನ್ನಡ ಸವಿಯನ್ನು ಎಲ್ಲರಿಗೂ ಉಣಬಡಿಸುತ್ತಿದೆ. ಇದು ಚಿಂತಾಮಣಿಯ ಯುವಸಾಹಿತಿ ಹಾಗೂ ಶಿಕ್ಷಕರಾಗಿರುವ ಕೆ.ಎನ್. ಅಕ್ರಂಪಾಷಾರವರ ಸಂಪಾದಕೀಯ ನೇತೃತ್ವದಲ್ಲಿ ಮೂಡಿಬರುತ್ತಿದೆ. ಯುವಕವಿ ಹಾಗೂ ಸಾಹಿತಿಗಳಿಗೆ ತಮ್ಮ ಕನ್ನಡ ಸಾಹಿತ್ಯವನ್ನು ಅಭಿವ್ಯಕ್ತಗೊಳಿಸಲು ಉತ್ತಮ ವೇದಿಕೆಯಾಗಿ ಕೂಡ ನಿರ್ವಹಿಸುತ್ತಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


















ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ